ಬಿರುಸು ಪಡೆದೆ ಚುನಾವಣೆ: ಕರಾವಳಿಯಲ್ಲಿ ಸಿಎಂ ಬೊಮ್ಮಾಯಿ ಟೆಂಪಲ್ ರನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಎಲ್ಲೆಡೆ ಬಿರುಸು ಪಡೆದಿದೆ. ವಿವಿಧ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಚುನಾವಣಾ ಅಖಾಡಾ ರಂಗೇರಿದೆ. ಇದರ ನಡುವೆ ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿಗಳು ದಿನವಿಡೀ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ಮುಗಿಸಿ ರಾತ್ರಿ ಮಂಗಳೂರಿಗೆ ಆಗಮಿಸಿದರು.

ಮಂಗಳೂರಿನಲ್ಲಿ ಮಂಗಳಾದೇವಿ ದೇವಸ್ಥಾನ, ಕಂಕನಾಡಿ ಬ್ರಹ್ಮ ಬೈದೆರ್ಕಳ ಗರಡಿಗೆ ಭೇಟಿ ನೀಡಿರುವ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ರಾತ್ರಿಯಲ್ಲಿ ತಂಗಿದ್ದ ಸಿಎಂ ಗುರುವಾರ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!