July 21, 2026
Tuesday, July 21, 2026
spot_img

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ! ನೆರೆಪೀಡಿತರಿಗೆ ಮೂಲ ಸೌಕರ್ಯ ಕಲ್ಪಿಸಿ: HDK ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸನ್ನಿವೇಶದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ ಮತ್ತು ನೆರೆಪೀಡಿತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೆಚ್‌.ಡಿಕೆ ಮನವಿ: ಕೇಂದ್ರ-ರಾಜ್ಯ ಸರ್ಕಾರಗಳು ನೆರೆಪೀಡಿತ ತಾಲ್ಲೂಕುಗಳಲ್ಲಿ ತುರ್ತು ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳನ್ನು ತಕ್ಷಣ ತಲುಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೆಚ್‌.ಡಿಕೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ. NDRF ಮತ್ತು SDRF ತಂಡಗಳು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಾಗಿ ಪರಿವರ್ತಿಸಿ, ನೆರೆಪೀಡಿತ ಕುಟುಂಬಗಳು ಮತ್ತು ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವಂತೆ ನೋಡಿಕೊಳ್ಳಬೇಕು.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆ ನಷ್ಟ ಉಂಟಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಪಶು-ಪ್ರಾಣಿಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸುವಂತೆ ಕ್ರಮಾವಳಿ ತ್ವರಿತಗೊಳಿಸಬೇಕು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !