ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷ ಎದುರಿಸಿದ ಗಂಭೀರವಾದ ಹಿನ್ನಡೆಗಳಿಂದ ಸರಿಯಾದ ಪಾಠಗಳನ್ನು ಕಲಿಯುವತ್ತ ಗಮನ ಹರಿಸಬೇಕು. ಸೋಲುಗಳಿಗೆ ಕಾರಣವಾದ ಅಂಶಗಳನ್ನು ಗುರುತಿಸಿ ಅವಲೋಕಿಸಲು ಸಣ್ಣದಾದ ಗುಂಪೊಂದನ್ನು ರಚಿಸಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ವಿಡಿಯೊ ಕಾನ್ಫರೆನ್ಸ್ ಮೂಲಕ ಸೋಮವಾರ ನಡೆದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಉದ್ಘಾಟನಾ ಭಾಷಣ ಮಾಡಿದ ಅವರು, ಈ ಗುಂಪು, ಹಿನ್ನೆಡೆಗೆ ಕಾರಣವಾಗುವ ಪ್ರತಿಯೊಂದು ಅಂಶವನ್ನೂ ಗುರುತಿಸಿ, ಅವಲೋಕಿಸಬೇಕು ಎಂದು ಅವರು ಹೇಳಿದರು.
ಇತ್ತೀಚೆಗೆ ನಡೆದ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಳದಲ್ಲಿ ಪಕ್ಷ ಕಳಪೆ ಪ್ರದರ್ಶನ, ಪುದುಚೇರಿಯಲ್ಲಿ ಅಧಿಕಾರ ಕಳೆದುಕೊಂಡಿದೆ. ಕೇರಳ ಮತ್ತು ಅಸ್ಸಾಂನಲ್ಲಿ ಮರಳಿ ಅಧಿಕಾರ ಪಡೆಯುವಲ್ಲಿ ಪಕ್ಷ ವಿಫಲ, ತಮಿಳುನಾಡಿನಲ್ಲಿ ಮಿತ್ರ ಪಕ್ಷ ಡಿಎಂಕೆ ಸಹಾಯದಿಂದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ಕಳಪೆ ಪದರ್ಶನವನ್ನು ಪರಾಮರ್ಶಿಸುವುದಕ್ಕಾಗಿಯೇ ಈ ಮಹತ್ವದ ಸಭೆಯನ್ನು ಕರೆಯಲಾಗಿದೆ.
ಚುನಾವಣೆಗಳಲ್ಲಾಗಿರುವ ಗಂಭೀರವಾದ ಹಿನ್ನಡೆಗಳ ಬಗ್ಗೆ ಗಮನ ಹರಿಸಬೇಕು. ಈ ಸೋಲಿನಿಂದ ನಾವು ತೀರಾ ನಿರಾಶೆಗೊಂಡಿದ್ದೇವೆ. ಇಂಥ ಸೋಲಿಗೆ ಕಾರಣವಾದ ಪ್ರತಿಯೊಂದು ಅಂಶವನ್ನು ಗಮನಿಸಿ, ಶೀಘ್ರ ವರದಿ ನೀಡುವುದಕ್ಕಾಗಿ ಒಂದು ಸಣ್ಣ ಗುಂಪನ್ನು ರಚಿಸುತ್ತಿದ್ದೇನೆ ಎಂದು ಸೋನಿಯಾ ಅವರು ಹೇಳಿದರು.
ಇವೆಲ್ಲ ಘಟನೆಗಳು ಅಹಿತಕರ ಪಾಠಗಳನ್ನು ಕಲಿಸುತ್ತವೆ. ಆದರೆ, ನಾವು ವಾಸ್ತವಕ್ಕೆ ಮುಖಾಮುಖಿಯಾಗಿ, ಸತ್ಯವನ್ನು ಅರ್ಥ ಮಾಡಿಕೊಳ್ಳದಿದ್ದರೆ, ಇವುಗಳಿಂದಲೂ ಸರಿಯಾದ ಪಾಠಗಳನ್ನು ಕಲಿಯುವುದಿಲ್ಲಎಂದು ಅವರು ಸ್ಪಷ್ಟಪಡಿಸಿದರು.