ಕಾರಿಗೆ -ಲಾರಿ ಡಿಕ್ಕಿ: ಮದುವೆಗೆ ಹೊರಟಿದ್ದ ದಂಪತಿ ದಾರುಣ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗೇಟ್ ಬಳಿ ನಡೆದಿದೆ.

ರಘು(35), ಅನುಷಾ(28) ಮೃತ ದಂಪತಿಯಾಗಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ಮೂಲದ ರಘು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಡನಹಳ್ಳಿ ಗ್ರಾಮದ ಅನುಷಾ ಎಂಬಾಕೆಯ ಜತೆಗೆ ಕಳೆದೆ ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ. ಸಂಬಂಧಿಕರೊಬ್ಬರ ಮದುವೆಗೆ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!