ಹೊಸ ದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಹಲವೆಡೆ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಅನಾಹುತವೇ ಸೃಷ್ಟಿಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಂಕಷ್ಟ ಎದುರಾಗಿದೆ. ಅಲ್ಲದೆ ಸಕ್ಕರೆ ನಾಡು ಮಂಡ್ಯದಲ್ಲಿ ಸೇತುವೆಯೇ ಕುಸಿದಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಡ್ಡಲಾಗಿ ನಿರ್ಮಿಸಿದ್ದ ಮಂಡ್ಯದ ಇಂಡುವಾಳು ಬಳಿ ಸೇತುವೆ ಕೊಚ್ಚಿಹೋಗಿದೆ.
ಹಳ್ಳದಲ್ಲಿ ನೀರು ಹೆಚ್ಚಾದ ಕಾರಣದಿಂದ ಸೇತುವೆ ಕೊಚ್ಚಿಹೋಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿರುವ ವಾಹನ ಸವಾರರು ಹೈರಾಣಾಗಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಳೆ ಹೆಚ್ಚಾದ್ರೆ ಹೆದ್ದಾರಿ ಇನ್ನಷ್ಟು ಕುಸಿಯುವ ಆತಂಕ ವ್ಯಕ್ತವಾಗಿದೆ.
ಈ ಮಧ್ಯೆ ಮಂಡ್ಯದ ಬೀಡಿ ಕಾಲನಿ ಸಂಪೂರ್ಣ ಜಲಾವೃತಗೊಂಡಿದ್ದು, 1000 ಕ್ಕೂ ಹೆಚ್ಚು ಮನೆಗಳಿರುವ ಕಾಲೋನಿ ರಾತ್ರಿಯಿಡೀ ನೀರಿನಿಂದ ಜಲಾವೃತಗೊಂಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ