ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಅಂತರ್ ಜಿಲ್ಲಾ ವರ್ಗಾವಣೆಗೆ ಸಚಿವ ಸಂಪುಟ ಸಭೆ ಅಸ್ತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಿಎಂ ನೇತೃತ್ವದ ಸಚಿವ ಸಂಪುಟ ಸಭೆ ಅವಕಾಶ ನೀಡಿದೆ.

ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೋರಲೂ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ.ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!