ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರುವ ಘೋರ ಘಟನೆ ನಡೆದಿದೆ.

ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಊರಿಗೆ ತೆರಳಲು ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದಾಗ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು ಯುವಕರು , ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ, ಸೆಟಲೈಟ್ ಬಸ್ ನಿಲ್ದಾಣದಲ್ಲಿ ಬರುತ್ತೆ. ಅಲ್ಲಿಗೆ ಬಿಡುತ್ತೇವೆ ಬಾ ತಂಗಿ ಎಂಬುದಾಗಿ ಪುಸಲಾಯಿಸಿದ್ದಾರೆ. ಇವರ ಮಾತನ್ನು ನಂಬಿದಂತ ಆಕೆ, ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದಾಳೆ.

ಬೈಕ್ ಹತ್ತಿಸಿಕೊಂಡು ಸೆಟಲೈಟ್ ಬಸ್ ನಿಲ್ದಾಣದ ಪಕ್ಕದಲ್ಲಿನ ತರಕಾರಿ ಮಾರುಕಟ್ಟೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಆ ಬಳಿಕ ಆಕೆಯ ಬಟ್ಟೆ ಬಿಚ್ಚಲು ಹೇಳಿದ್ದಾರೆ. ನರ್ಸ್ ವಿರೋಧ ವ್ಯಕ್ತ ಪಡಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಈ ಬಳಿಕ ಒಬ್ಬಾತ ಆಕೆಯ ಮೇಲೆ ಅತ್ಯಾಚಾರಗೈದಿದ್ದು, ಮತ್ತಿಬ್ಬರು ಆತನಿಗೆ ಸಹಕರಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ನರ್ಸ್ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಜಯಪುರ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!