ಧರಣಿ ನಿರತ ಮುಖಂಡನಿಗೆ ಬಿಪಿ ಲೋ, ಆಸ್ಪತ್ರೆಗೆ ದಾಖಲು

ಹೊಸ ದಿಗಂತ ವರದಿ, ಕಲಬುರಗಿ:

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ ನಡೆಸುತ್ತಿರುವ ಮಾದಿಗ ಸಮಾಜದ ಧರಣಿ ನಿರತ ಮುಖಂಡರೊಬ್ಬರಿಗೆ ಬಿಪಿ ಲೋ ಆಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಸಂಗ ಬುಧವಾರ ನಡೆದಿದೆ.

ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ 11 ದಿನಗಳಿಂದ ಮಾದಿಗ ಸಮಾಜದ ಮುಖಂಡರು,ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ಸ್ಥಳದಲ್ಲಿ ಮುಖಂಡರೊಬ್ಬರಿಗೆ ದಿಢೀರನೆ ಬಿಪಿ ಲೋ ಆಗಿದೆ. ಕೂಡಲೇ ಅವರನ್ನು ಆಂಬ್ಯುಲೆನ್ಸ ಮೂಲಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.

ತಮ್ಮ ಬೇಡಿಕೆ ಈಡೇರಿಸುವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಬಿಗಿಪಟ್ಟು ಹಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!