ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಾಲನೆಯಲ್ಲಿರವಾಗಲೇ ಲಾರಿ ಚಾಲನೋರ್ವನಿಗೆ ಹಠಾತ್ ಮೂರ್ಚೆ ರೋಗ ಬಾಧಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ಗೆ ನುಗ್ಗಿದ ಘಟನೆ ಬಿ.ಸಿ.ರೋಡಿನಲ್ಲಿ ಬುಧವಾರ ನಡೆದಿದೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮಂಗಳೂರು ಕಡೆಯಿಂದ ಹಾಸನಕ್ಕೆ ತೆರಳುತ್ತಿದ್ದಾಗ ಚಾಲಕನಿಗೆ ಹಠಾತ್ ಮೂರ್ಛೆ ರೋಗ ಭಾಧಿಸಿ ಬಿ.ಸಿ.ರೋಡಿನ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದೆ.
ಚಾಲಕನನ್ನು ಲಕ್ಷಣ್ ಎಂದು ಹೆಸರಿಸಲಾಗಿದ್ದು, ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ತುಂಬಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಬೈಕ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ.