ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ಹೈಕೋರ್ಟ್ ಇದೇ ಮೊದಲ ಬಾರಿಗೆ ಪ್ರಕಣವೊಂದರ ಕನ್ನಡದಲ್ಲೇ ತೀರ್ಪನ್ನು ಪ್ರಕಟಿಸಿದೆ.
ಡಿಸೆಂಬರ್ 11 ಭಾರತ ಭಾಷಾ ದಿವಸದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾ. ಕೃಷ್ಣ ಎಸ್.ದೀಕ್ಷಿತ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.
ಇಂಗ್ಲೆಂಡ್ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730 ರಿಂದ ಅವರ ಸ್ವಭಾಷೆ ಇಂಗ್ಲಿಸ್ನಲ್ಲೇ ಕಲಾಪ ಆರಂಭಿಸಿದ್ದರು. ಆದ್ರೆ, ಜನಸಾಮಾನ್ಯರಿಗೆ ಕೋರ್ಟ್ಗಳ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ. ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೈರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.