ನಮಗೆ ದೇಶ ಮೊದಲು, ಕೆಲವರಿಗೆ ಮೋದಿ ಮೊದಲು: ಶಶಿ ತರೂರ್ ವಿರುದ್ಧ ಖರ್ಗೆ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರನ್ನು ಟೀಕಿಸಿದ್ದಾರೆ.

ಇತ್ತೀಚೆಗೆ ಶಶಿ ತರೂರ್, ಪ್ರಧಾನಿ ಮೋದಿಯವರ ಶಕ್ತಿ, ಕ್ರಿಯಾಶೀಲತೆ ಮತ್ತು ಎಲ್ಲದರಲ್ಲೂ ತೊಡಗಿಕೊಳ್ಳುವ ಅವರ ಸಾಮರ್ಥ್ಯವು ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ‘ಬಹುದೊಡ್ಡ ಆಸ್ತಿ’ಯಾಗಿದೆ ಎಂದು ವಿವರಿಸಿದ್ದರು. ಅಲ್ಲದೇ ಆಪರೇಷನ್ ಸಿಂಧೂರ ನಂತರ ಶಶಿ ತರೂರ್ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷಮುಜುಗರ ತಂದಿಟ್ಟಿತ್ತು. ಹೀಗಾಗಿ ಪಕ್ಷದ ನಾಯಕರೊಂದಿಗಿನ ಅವರ ಸಂಬಂಧವನ್ನು ಮತ್ತಷ್ಟು ಹದಗೆಡಿಸಿತು. ಪಕ್ಷದ ಹಲವಾರು ಮುಖಂಡರು ಈಗಾಗಲೇ ತರೂರ್ ಪಕ್ಷದಿಂದ ವಿಮುಖರಾಗಿದ್ದಾರೆ ಎಂದು ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಇಂದು ಖರ್ಗೆ, ‘ಅವರು (ಶಶಿ ತರೂರ್) ಇಂಗ್ಲಿಷ್‌ನಲ್ಲಿ ತುಂಬಾ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ. ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ’ ಎಂದು ಹೇಳಿದರು.

26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಇಡೀ ವಿರೋಧ ಪಕ್ಷವು ಭಾರತೀಯ ಸೇನೆಯ ಪರ ದೃಢವಾಗಿ ನಿಂತಿದೆ ಎಂದ ಖರ್ಗೆ, ‘ನಾವು ದೇಶ ಮೊದಲು, ಪಕ್ಷ ನಂತರ ಎಂದು ಹೇಳಿದ್ದೆವು. ಆದರೆ ಕೆಲವರು ಮೋದಿ ಮೊದಲು, ದೇಶ ನಂತರ ಎಂದು ಭಾವಿಸುತ್ತಾರೆ. ಇದಕ್ಕೆ ನಾವು ಏನು ಮಾಡಬಹುದು?’ ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!