ಹೊಸದಿಗಂತ ಡಿಜಿಟಲ್ ಡೆಸ್ಕ್
ದೇಶದ ಭದ್ರತೆಗೆ ಬಲವಂತದ ಮತಾಂತರವು ಅಪಾಯಕಾರಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಂಸತ್ತಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂತಹ ಚಟುವಟಿಕೆಗಳಿಗೆ ಆಸ್ಪದ ಕೊಡುವುದಿಲ್ಲ. ಯಾರು ನಿಯಮ ಪಾಲಿಸುವುದಿಲ್ಲವೋ, ಯಾರು ಬಲವಂತದ ಮತಾಂತರದಲ್ಲಿ ತೊಡಗುತ್ತಾರೋ, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೆ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಇನ್ನು ಕಾಂಗ್ರೆಸ್ ವಿರುದ್ಧ ಮಾತನಾಡಿದ ಅವರು, ‘ಯುಪಿಎ ಆಡಳಿತದಲ್ಲಿ ಬಲವಂತದ ಮತಾಂತರ ತಡೆಯುವ ದಿಸೆಯಲ್ಲಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ಮಾತ್ರ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ’ ಎಂದು ಹೇಳಿದ್ದಾರೆ.
ಹೀಗಾಗಿ ಇದೀಗ ಅಮಿತ್ ಶಾ ಅವರು ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಸುಳಿವು ನೀಡಿದ್ದಾರೆ.