ಕುಶಾಲನಗರ ಸಮೀಪ ವೃದ್ಧೆ ಮೇಲೆ ಕಾಡಾನೆ ದಾಳಿ, ಸ್ಥಿತಿ ಗಂಭೀರ

ಹೊಸದಿಗಂತ ವರದಿ ಕುಶಾಲನಗರ:

ಕಾಡಾನೆ ದಾಳಿಗೆ ಸಿಲುಕಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಚಿನ್ನೇನಹಳ್ಳಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಚಿನ್ನೇನಹಳ್ಳಿ ಗ್ರಾಮದ ವೆಂಕಟಮ್ಮ ಎಂಬವರೇ ಕಾಲು ಮುರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ಗುರುವಾರ ಬೆಳಗ್ಗೆ ಬಹಿರ್ದೆಸೆಗೆಂದು ಮನೆಯಿಂದ ಹೊರಗೆ ಹೋದಾಗ ಕಾಡಾನೆ ದಾಳಿ‌ ನಡೆಸಿದ್ದು, ಅವರ ಬಲಗಾಲು ಸಂಪೂರ್ಣವಾಗಿ ಜಖಂಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!