ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅಡ್ಯನಡ್ಕ ಸಮೀಪದ ಪಂಜಿಕಲ್ಲು ಭಾಗದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು,ಎಲ್ಲೆಡೆ ಬೆಂಕಿ ವ್ಯಾಪಿಸಿದೆ .
ಇದರ ಬೆನ್ನಲ್ಲೇ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪಂಜಿಕಲ್ಲು ನಾರಾಯಣ ನಾಯ್ಕ ಅವರಿಗೆ ಸೇರಿದ ಜಾಗಕ್ಕೆ ಬೆಂಕಿ ಬಿದ್ದಿದ್ದು, ಒಮ್ಮೆ ಶಮನಗೊಳಿಸುವ ಕಾರ್ಯ ಮಾಡಲಾಗಿತ್ತಾದರೂ, ಮತ್ತೆ ಏಕಾಏಕಿ ಬೆಂಕಿ ಕಾಣಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಸಂಪರ್ಕಿಸಿದ್ದಾರೆ.