ಬನ್ನೇರುಘಟ್ಟ ಬಳಿ ಕಾಡಾನೆ ದಾಳಿಗೆ ಅರಣ್ಯ ರಕ್ಷಕ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಡಾನೆ ದಾಳಿಗೆ ಸಿಲುಕಿ ಅರಣ್ಯ ರಕ್ಷಕರೊಬ್ಬರು ಮೃತಪಟ್ಟ ಘಟನೆ ಬನ್ನೇರುಘಟ್ಟ ಹಕ್ಕಿಪಿಕ್ಕಿ ಕಾಲೋನಿಯ ಬಳಿ ನಡೆದಿದೆ.

ಬನ್ನೇರುಘಟ್ಟ ಮೂಲದ ಚಿಕ್ಕಮಾದಯ್ಯ ಕಾಡಾನೆ ದಾಳಿಗೆ ಮೃತಪಟ್ಟ ಅರಣ್ಯ ರಕ್ಷಕ. ಕಳೆದ 20 ವರ್ಷಗಳಿಂದ ಅರಣ್ಯ ರಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಹಕ್ಕಿ ಪಿಕ್ಕಿ ಕಾಲೋನಿ ಸಮೀಪ ಕಾಡಾನೆ ಕಾಣಿಸಿಕೊಂಡಿದೆ. ಆನೆಯನ್ನು ಕಾಡಿಗಟ್ಟಲು ಅರಣ್ಯ ರಕ್ಷಕ ಪ್ರಯತ್ನಿಸುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.

ಆನೆ ತುಳಿತಕ್ಕೆ ಒಳಗಾದ ಚಿಕ್ಕ ಮಾದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಡವರ ಸಾವಿಗೆ ಕಿಂಚಿತ್ತು ಬೆಲೆ ಇಲ್ಲ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!