ಹೊಸದಿಗಂತ ವರದಿ ಮೈಸೂರು:
ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ.
ಪೂಜೆ ಸಲ್ಲಿಸುವ ವೇಳೆ ಶೂ ಧರಿಸಿಯೇ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ ಇತರೆ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು. ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ,ಶೂ ಧರಿಸುವುದಿಲ್ಲ. ಆದ್ರೆ ಉಮೇಶ್ ಕತ್ತಿ ಎಲ್ಲವನ್ನೂ ಗಾಳಿಗೆ ತೂರಿ ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.