ಹೊಸದಿಗಂತ ಡಿಜಿಟಲ್ ಡೆಸ್ಕ್:
ದಯವಿಟ್ಟು ನಮ್ಮನ್ನು ಕ್ಷಮಿಸಿ ಕಾರ್ಯಕರ್ತರೇ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ನಮ್ಮ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸುತ್ತಾರೆ. ತಮ್ಮ ಮನೆ, ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುತ್ತಾರೆ. ಸಿದ್ಧಾಂತ ಇಟ್ಟುಕೊಂಡು ಬದುಕುತ್ತಾರೆ. ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಸೋತಾಗ ನಮ್ಮ ಮೇಲೆ ಸಿಟ್ಟಾಗುವ ಹಕ್ಕೂ ಇದೆ.
ಪಕ್ಷ ಸೋತು ಅನಾಥವಾಗಿದೆ. ಆದರೆ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವುದೇ ನಾಯಕನಲ್ಲ. ನಮ್ಮನ್ನು ದಯವಿಟ್ಟು ಕ್ಷಮಿಸಿ ಎಂದಿದ್ದಾರೆ.
ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಎಂದು ಹೇಳಿದ್ದಾರೆ.