ಹೊಸದಿಗಂತ ವರದಿ,ಹಾವೇರಿ:
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸುನಾಮಿ ಇರುವುದು ಬಹಳ ಸ್ಪಷ್ಟವಾಗಿದೆ. ರಾಜ್ಯದಲ್ಲಿ ನೂರಕ್ಕೆ ನೂರು ಬಿಜೆಪಿ ಸರ್ಕಾರ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಜಿಲ್ಲೆಯ ಶಿಗ್ಗಾವ್ ತಾಲೂಕಿನ ತಡಸ ಗ್ರಾಮದಲ್ಲಿ ಗುರುವಾರ ರೋಡ್ ಶೋ ನಡೆಸಿ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ದಕ್ಷಿಣ ಕರ್ನಾಟಕ ಸೇರಿದಂತೆ ಎಲ್ಲ ಕಡೆಗಳಲ್ಲಿ ಬಿಜೆಪಿ ಅಲೆ ಎದ್ದಿದೆ ಬಿಜೆಪಿ ಸರ್ಕಾರ ರಚವೆ ಮಾಡುವುದು ನಿಶ್ಚಿತ ಎಂದರು.