ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿರುತ್ತಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ.
ಇವರಲ್ಲದೆ 24 ಮಂದಿಯನ್ನು ಈ ಸಮಿತಿಗೆ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿದೆ.
ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ ವಿಶ್ವಶರ್ಮ, ವಿಷ್ಣುದೇವ್ ಸಾಯಿ, ಮೋಹನ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಾಮ್, ಸುರಸಿಲ್, ರವಿಶಂಕರ್, ಮೋದಿ ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವ್ಡೆ, ರಾಧಾಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಖರ್, ಅನಿಲ್ ಆಂಟೋನಿ, ತಾರಿಕ್ ಮನ್ಸೂರ್ ಈ ಸಮಿತಿಯ ಸದಸ್ಯರಾಗಿದ್ದಾರೆ.
भाजपा राष्ट्रीय अध्यक्ष श्री @JPNadda ने लोकसभा चुनाव-2024 के लिए चुनाव घोषणा-पत्र समिति का गठन किया है।
BJP National President Shri JP Nadda has announced Election Manifesto Committee for the Lok Sabha Elections – 2024. pic.twitter.com/KMrBpqkQQF
— BJP (@BJP4India) March 30, 2024