ಹೊಸದಿಗಂತ ವರದಿ, ವಿಜಯಪುರ:
ಮಾಜಿ ಸಿಎಂ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ರಾಜಕೀಯವಾಗಿ ಹಲವು ಆಟಗಳನ್ನಾಡುತ್ತಾ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯಸಭೆ ಚುನಾವಣೆ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿ, ನಮ್ಮ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲುತ್ತಾರೆ ಎಂದರು.
ಮುಂದಿನ ಸಿಎಂ ವಿಜಯೇಂದ್ರ ಘೋಷಣೆ ವಿಚಾರ ಕುರಿತು ಪ್ರತಿಕ್ರಿಯಿಸಿ, ವಿಜಯೇಂದ್ರಗೆ ಒಳ್ಳೆಯ ಭವಿಷ್ಯ ಇದೆ ಎಂದು ಆತ್ಮಿಯರು, ಸ್ನೇಹಿತರು ಹೇಳುತ್ತಾರೆ ಎಂದು ಹೇಳಿದರು. ವಿಜಯೇಂದ್ರ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ