ಬಿಜೆಪಿ ಮಾಜಿ ಸಚಿವರು ಶಾಸಕರ ವಿಶೇಷ ಸಭೆ ನಡೆಸಿದ ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೆಂದ್ರ ಅವರು ಬಿಜೆಪಿ ಪಕ್ಷದ ಪರಾಜಿತರು ಹಾಗೂ ಮಾಜಿ ಶಾಸಕರ ಸಭೆ ನಡೆಸಿ ಒಗ್ಗಟ್ಟಿನ ಜಪ ಮಾಡಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ 130ಕ್ಕೂ ಹೆಚ್ಚು ಪರಾಜಿತರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ಸುಳಿವನ್ನೂ ಕೊಡಲಾಗಿದೆ. ಸಭೆಯಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುವ ಪಣ ತೊಟ್ಟಿದ್ದು, ಈ ಮೂಲಕ ಮಾಜಿಗಳು ಹಾಗೂ ಪರಾಜಿತರ ವಿಶ್ವಾಸಗಳಿಸುವ ಕಸರತ್ತು ನಡೆಸಿದ್ದಾರೆ. ಈ ಮೂಲಕ ಮುಂದಿನ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಸೂಕ್ತ ತಯಾರಿಗೂ ಮುಂದಾಗಿದ್ದಾರೆ.

ಸಭೆಯಲ್ಲಿ ಪಕ್ಷದ ಒಳಗಿನ ವಿಚಾರಗಳೂ ಚರ್ಚೆ ನಡೆಯಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!