ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರು ಮನೆಗೆ ಆಗಮಿಸಿದ್ದರು. ಬೆಳಗ್ಗೆ 3:30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದರು. ಇಂದು ಬೆಳಗ್ಗೆ ಮನೆಯಿಂದ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಇಂದು ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.

ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಪೊಲೀಸರ ಅಲರ್ಟ್‌ ಆಗಿದ್ದು, ನಿವಾಸದ ಅಕ್ಕಪಕ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ಕಲ್ಪಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!