ಮಾಜಿ ಸಿಎಂ ಕುಮಾರಸ್ವಾಮಿ ಹಿಂದೂ ವಿರೋಧಿ ಧೋರಣೆ: ಬಿಜೆಪಿ ಯುವ ಮೋರ್ಚಾ ಖಂಡನೆ

ಹೊಸದಿಗಂತ ವರದಿ, ಮೈಸೂರು
ಆಜಾನ್ ವಿರುದ್ಧವಾಗಿ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸ್ ಪಠಣೆಗೆ ಚಾಲನೆ ನೀಡಿದ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಬಿಜೆಪಿ ಮೈಸೂರು ನಗರ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ಎಂ.ಸಂತೋಷ್‌ಕುಮಾರ್ ಖಂಡಿಸಿದ್ದಾರೆ.
ಮತಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಾ ಮುಸ್ಲಿಮರ ಓಲೈಕೆ ರಾಜಕಾರಣ ಮಾಡುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಆಜಾನ್ ಕೇಳಿಯೇ ನಾನು ಬೆಳೆದೆ ಎನ್ನುತ್ತಿದ್ದಾರೆ. ಆದರೆ ಯಾವತ್ತೂ ಶಿವನ ಸ್ಮರಣೆಗೆ ಹೇಳುವ ಭಜನೆ ಕೇಳಿಲ್ಲವೇ. ನಿಮ್ಮ ಈ ಎಲ್ಲಾ ಗೊಂದಲಮಯ ಹೇಳಿಕೆಗಳನ್ನು ಸಾರ್ವಜನಿಕರು ಗಮನಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!