ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ದೇವೇಗೌಡರ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ‘ಮಾಜಿ ಪ್ರಧಾನಿ ದೇವೇಗೌಡರನ್ನು ಒಂದು ತಿಂಗಳ ಹಿಂದೇಯೇ ನೋಡಲು ಬರಬೇಕಂದಿದ್ದೆ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ನಾನು ಕಂಡಂತೆ ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಇದ್ದರೆ ಅದುವೇ ದೇವೇಗೌಡರು ಎಂದು ಹೇಳಿದ್ದಾರೆ, ಅವರಿಗೆ ದೇವರು ಆರೋಗ್ಯ ಕೊಡಲಿ, ಚೆನ್ನಾಗಿಡಲಿ ಎಂದುಹೇಳಿದರು.
ನಿನ್ನೆಯಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.