ಹೊಸದಿಗಂತ ಡಿಜಿಟಲ್ ಡೆಸ್ಕ್
ಹರಿಯಾಣದ ಮಾಜಿ ಕಾಂಗ್ರೆಸ್ ಮುಖಂಡ ಕುಲ್ ದೀಪ್ ಬಿಷ್ಣೋಯಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಬಿಜೆಪಿ ಪಕ್ಷದ ಇತರ ಮುಖಂಡರ ಸಮ್ಮುಖದಲ್ಲಿ ಬಿಷ್ಣೋಯಿ ಮತ್ತು ಪತ್ನಿ ರೇಣುಕಾ ಬಿಷ್ಣೋಯಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿಗೆ ಸೇರ್ಪಡೆಗೊಂಡ ನಂತರ ಮಾತನಾಡಿದ ಬಿಷ್ಣೋಯಿ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಪ್ರಧಾನಿಯಾಗಿದ್ದು, ಅವರು ಯಾವಾಗಲೂ ದೇಶದ ಕುರಿತು ಹಾಗೂ ಬಡವರ ಏಳಿಗೆ ಕುರಿತು ಚಿಂತಿಸುತ್ತಾರೆ ಎಂದು ಹೇಳಿದರು.
ಸತತ ಎಂಟು ವರ್ಷಗಳಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಖಟ್ಟರ್ ಅವರ ಕಾರ್ಯವೈಖರಿಯನ್ನು ಬಿಷ್ಣೋಯಿ ಹೊಗಳಿದರು. ಬಿಷ್ಣೋಯಿ ಅವರು ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆ ಇರುವುದಾಗಿ ವರದಿ ತಿಳಿಸಿದೆ.
ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿದ್ದ ಬಿಷ್ಣೋಯಿ ಅವರನ್ನು ಕಾಂಗ್ರೆಸ್ ಪಕ್ಷ ಉಚ್ಛಾಟಿಸಿತ್ತು.