ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ (Hemanth Soren) ಅವರನ್ನು 5 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಲಾಗಿದೆ.
ಹೇಮಂತ್ ಸೋರೆನ್ ಅವರನ್ನು ಬುಧವಾರ ಸಂಜೆ ಬಂಧಿಸಲಾಗಿತ್ತು. ಬಳಿಕ ಗುರುವಾರ ಮಧ್ಯಾಹ್ನ ಅವರನ್ನು ರಾಂಚಿಯ PMLA ಕೋರ್ಟಿಗೆ ಹಾಜರುಪಡಿಸಲಾಯಿತು. ಈ ವೇಳೆ ಇಡಿ 10 ದಿನಗಳ ಕಾಲ ಕಸ್ಟಡಿಗೆ ಕೋರಿತ್ತು. ನ್ಯಾಯಾಲಯ ಸೋರೆನ್ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಇಂದು 5 ದಿನಗಳ ಕಾಲ ಇಡಿ ಕಸ್ಟಡಿಗೆ ಹೇಮಂತ್ ಸೋರೆನ್ ಅವರನ್ನು ಒಪ್ಪಿಸಲಾಗಿದೆ.
ಈ ನಡುವೆ ತಮ್ಮನ್ನು ಬಂಧಿಸಿದ ಜಾರಿ ನಿರ್ದೇಶನಾಲಯ (ED) ನಿರ್ಧಾರ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ (Hemanth Soren) ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ. ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿ ಸದಸ್ಯ ಪೀಠವು ಹೈಕೋರ್ಟ್ ಸಂಪರ್ಕಿಸುವಂತೆ ಸೂಚನೆ ನೀಡಿದೆ.