ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ತಿನ ಮಾಜಿ ಸದಸ್ಯರು, ಸಹಕಾರಿ ದಿಗ್ಗಜರಾದ ಬಿ.ಎಸ್. ವಿಶ್ವನಾಥ್ ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ವನಾಥ್ ಅವರು ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ತೀರ್ಥಹಳ್ಳಿಯ ಬಸರಹಳ್ಳಿ ಗ್ರಾಮದವರಾದ ವಿಶ್ವನಾಥ್ ಅವರು ಸಾಂಸ್ಕೃತಿಕ ರಾಯಭಾರಿಯಾಗಿದ್ದರು, ವಿಶ್ವನಾಥ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಹಕಾರಿ ಸಂಸ್ಥೆಗಳಲ್ಲಿ, ಕೆನರಾ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ವಿಶ್ವನಾಥ್ ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.