ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಜೈಲು ಪಾಲು, ಮೇ 14ರವರೆಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಸನದಲ್ಲಿ ಮಹಿಳೆಯ ಕಿಡ್ನಾಪ್ ಮಾಡಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಕಸ್ಟಡಿಯ ಅವಧಿ ಅಂತ್ಯವಾಗಿದ್ದು,  ಎಸ್‌ಐಟಿ ಅಧಿಕಾರಿಗಳು ಇಂದು ಮತ್ತೆ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹೆಚ್‌.ಡಿ ರೇವಣ್ಣ ಅವರನ್ನು ಹಾಜರುಪಡಿಸಲಾಗಿದೆ. ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದಾರೆ.

ವಾದ ಆಲಿಸಿದ ಜಡ್ಜ್‌ ಹೆಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹತ್ವದ ಆದೇಶ ನೀಡಿದೆ. ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಇಂದಿನಿಂದ ಮೇ. 14ರವರೆಗೆ ಹೆಚ್‌.ಡಿ ರೇವಣ್ಣ ಅವರು ಜೈಲು ಪಾಲಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!