ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಕೆ.ಎಸ್.ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ನಾನು ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಕೆಎಸ್ ಈಶ್ವರಪ್ಪ ಅವರು ಈಗಾಗಲೆ ಹೇಳಿದ್ದಾರೆ. ಇನ್ನು ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ನೋಟಿಸ್ ನೀಡುವ ಸಾಧ್ಯತೆ ಇದೆ.