ಮಾಜಿ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ, ಸಣ್ಣ-ಪುಟ್ಟ ಗಾಯ

ಹೊಸದಿಗಂತ ವರದಿ ತುಮಕೂರು:

ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ 10.45ರ ಸಮಯದಲ್ಲಿ ಪಲ್ಟಿಯಾಗಿದ್ದು, ಜಯಚಂದ್ರ ಅವರ ಕೈಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಅವರು ಬೆಂಗಳೂರಿನತ್ತ ಹೊರಟಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ಸಿಬಿ ಕ್ರಾಸ್​ ಬಳಿ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಪ್ರಾಣಾಪಾಯದಿಂದ ಮಾಜಿ ಸಚಿವ ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಪಾರಾಗಿದ್ದಾರೆ. ಮಾಜಿ ಸಚಿವರ ಕೈಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!