ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ಮನೆಯಿಂದ ಹೊರಟಿದ್ದರು. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮುಮ್ತಾಜ್ ಅಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮೊಯ್ದಿನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
#WATCH | Mangaluru, Karnataka: Mangaluru Police Commissioner Anupam Agrawal says, “Today early morning we received information that a businessman Mumthaz Ali’s vehicle was found near Kulur bridge. He might have jumped from the bridge. Local police reached the spot and started the… pic.twitter.com/t2yJzC66fi
— ANI (@ANI) October 6, 2024