ಮಾಜಿ ಶಾಸಕ ವೈಎಸ್ ವಿ ದತ್ತಾ ಪಕ್ಷೇತರ ಸ್ಪರ್ಧೆ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್ ವಿ ದತ್ತಾಗೆ ( Farmer MLA YSV Datta ) ಕಡೂರು ಕ್ಷೇತ್ರದ ಕೈ ಟಿಕೆಟ್ ತಪ್ಪಿತ್ತು. ಈ ಹಿನ್ನಲೆ ಕಾಂಗ್ರೆಸ್ ವಿರುದ್ಧ ತಾವು ಟವೆಲ್ ಗುರುತಿನಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಇಂದು ಮಾಜಿ ಶಾಸಕ ವೈಎಸ್ ವಿ ದತ್ತಾ ಅವರು, ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿದ್ದು, ಅಭಿಮಾನಿಗಳು ಪಾಲ್ಗೊಂಡಿದ್ದರು. ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ, ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಿಸಿದ್ದಾರೆ.

ನಾನು ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದರು. ಅಲ್ಲದೇ ಚುನಾವಣಾ ಖರ್ಚಿಗಾಗಿ ಟವಲ್ ಹಾಕಿ ಸಮಾವೇಶದಲ್ಲೇ ಹಣ ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದಂತ ಅವರು, ಕಡೂರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು ಮುಗಿದು ಹೋದ ಕತೆಯಾಗಿದೆ. ಕಾಂಗ್ರೆಸ್ ಪಕ್ಷದಿಂದ ಹಣ, ಜಾತಿ ಬಲದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ನನಗೆ ಜಾತಿ ಬಲವೂ ಇಲ್ಲ, ಹಣ ಬಲವು ಇಲ್ಲ. ಮೈತುಂಬಾ ಸಾಲ ಮಾಡಿಕೊಂಡಿದ್ದೇನೆ. ನನಗೆ ಯಾಕೆ ಟಿಕೆಟ್ ಕೊಡುತ್ತಾರೆ ಎಂಬುದಾಗಿ ಹೇಳುವ ಮೂಲಕ ಭಾವುಕರಾದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!