ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು ಟೀಮ್ ಇಂಡಿಯಾದ ಮಾಜಿ ಆಟಗಾರ್ತಿ, ಕನ್ನಡತಿ ವೇದಾ ಕೃಷ್ಣಮೂರ್ತಿ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಬೆಂಗಳೂರಿನಲ್ಲಿ ನಡೆದ ಎರಡು ಮತ್ತು ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾಕ್ಟರೇಟ್ ಪದವಿಯನ್ನು ವೇದಾ ಕೃಷ್ಣಮೂರ್ತಿ ಅವರಿಗೆ ಪ್ರದಾನ ಮಾಡಿದ್ದಾರೆ.
ವೇದಾ ಕೃಷ್ಣಮೂರ್ತಿ ಜೊತೆಗೆ ಉದ್ಯಮಿ ಕಿರಣ್ ಮಜುಂದಾರ್ ಶಾ, ಸ್ಯಾಂಡಲ್ವುಡ್ನ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಆಯುರ್ವೇದ ವೈದ್ಯ ಡಾ.ಬಿ.ಟಿ ರುದ್ರೇಶ್, ಬರಹಗಾರ್ತಿ ದು.ಸರಸ್ವತಿ, ಶಿಕ್ಷಣ ತಜ್ಞರಾದ ಡಾ.ಎಚ್.ಎನ್ ಉಷಾ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
2011ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವೇದಾ ಕೃಷ್ಣಮೂರ್ತಿ 48 ಏಕದಿನ ಪಂದ್ಯ, 20 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ್ದರು. ಏಕದಿನ ಮಾದರಿಯಲ್ಲಿ 48 ಪಂದ್ಯಗಳಿಂದ 829 ರನ್ಗಳಿಸಿದ್ದ ವೇದಾ, ಟಿ20ಯಲ್ಲಿ ಆಡಿದ 76 ಪಂದ್ಯದಿಂದ 875 ರನ್ಗಳಿಸಿದ್ದರು. 2020ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಆಡಿದ್ದ ವೇದಾ, ಕಳೆದ ಜುಲೈನಲ್ಲಿ ನಿವೃತ್ತಿ ಘೋಷಣೆ ಮಾಡಿದ್ದರು.