ಜಿ20 ಶೃಂಗಸಭೆ ಔತಣಕೂಟಕ್ಕೆ ಮಾಜಿ ಪಿಎಂ ಮನಮೋಹನ್ ಸಿಂಗ್, ದೇವೇಗೌಡರಿಗೆ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ.

ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಪಂಚದಾದ್ಯಂತ ಅನೇಕ ಗಣ್ಯರು ದೆಹಲಿಗೆ ಆಗಮಿಸಲು ಪ್ರಾರಂಭಿಸಿದ್ದಾರೆ.

ಪ್ರಸ್ತುತ ಸಚಿವ ಸಂಪುಟದಲ್ಲಿರುವ ವಿದೇಶಿ ಪ್ರತಿನಿಧಿಗಳು, ಸಂಸದರು ಮತ್ತು ಸಚಿವರುಗಳಲ್ಲದೆ, ಜಿ 20 ಶೃಂಗಸಭೆಯ ಭೋಜನಕೂಟದಲ್ಲಿ ರಾಷ್ಟ್ರದ ಕೆಲವು ಮಾಜಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ. ದೇವೇಗೌಡರನ್ನು ಸಹ ಜಿ20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಔತಣಕೂಟ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!