ವಿಜ್ಞಾನಿ ಸ್ವಾಮಿನಾಥನ್ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ವಿಜ್ಞಾನಿ ಎಂ ಎಸ್ ಸ್ವಾಮಿನಾಥನ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಸಂತಾಪ ವ್ಯಕ್ತಪಡಿಸಿದ್ದು, ಹಲವು ಸಂದರ್ಭಗಳಲ್ಲಿ ಅವರ ಸಲಹೆಗಳಿಂದ ಹೆಚ್ಚಿನ ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶ
ದೇವೇಗೌಡರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು ಡಾ. ಎಂಎಸ್ ಸ್ವಾಮಿನಾಥನ್ ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಅನೇಕ ಸಂದರ್ಭ ಅವರ ಸಲಹೆಯಿಂದ ನಾನು ಹೆಚ್ಚು ಪ್ರಯೋಜನ ಪಡೆದಿದ್ದೇನೆ. ಇತ್ತೀಚಿನವರೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!