July 11, 2026
Saturday, July 11, 2026
spot_img

NDA ತೊರೆದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರ್‌ ಸೆಲ್ವಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ, ಓ ಪನ್ನೀರ್‌ಸೆಲ್ವಂ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ದಿಂದ ಹೊರಬರುವ ನಿರ್ಧಾರವನ್ನು ಘೋಷಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಸೆಲ್ವಂ ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಪನ್ನೀರ್‌ಸೆಲ್ವಂ ಅವರು ಇತ್ತೀಚೆಗೆ ತಮಿಳುನಾಡಿನ ಗಂಗೈಕೊಂಡ ಚೋಳಪುರಂಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಲುವಾಗಿ ಪತ್ರ ಬರೆದಿದ್ದರು. ಅವರನ್ನು ಭೇಟಿಯಾಗುವುದು ತಮಗೆ “ಅದ್ವಿತೀಯ ಗೌರವ” ಎಂದು ಹೇಳಿದ್ದರು ಮತ್ತು ಔಪಚಾರಿಕವಾಗಿ ಅಪಾಯಿಂಟ್ಮೆಂಟ್ ಕೋರಿದ್ದರು. ಆದಾಗ್ಯೂ, ಅವರಿಗೆ ಮೋದಿ ಭೇಟಿ ಮಾಡಲು ಅವಕಾಶ ನೀಡಲಾಗಿಲ್ಲ.

ಈ ತಿರಸ್ಕಾರದ ನಂತರ, ಅವರು ಸರ್ವ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ನಿಧಿಗಳನ್ನು ವಿತರಿಸುವಲ್ಲಿನ ವಿಳಂಬದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರವನ್ನು ಸಾರ್ವಜನಿಕವಾಗಿ ಟೀಕಿಸಿದರು . ಈ ಘಟನೆ ಬಳಿಕ ಅವರು ಮೈತ್ರಿಕೂಟವನ್ನು ತೊರೆದಿದ್ದಾರೆ.

2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಓಪಿಎಸ್ ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ ಎಂದು ಹೇಳಿದರು. “ಪ್ರಸ್ತುತ, ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ. ಭವಿಷ್ಯದಲ್ಲಿ, ಚುನಾವಣೆ ಹತ್ತಿರ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ನಟ ವಿಜಯ್ ಅವರ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಕೈಜೋಡಿಸುವ ಸಾಧ್ಯತೆಯನ್ನು ಅವರು ತಳ್ಳಿ ಹಾಕಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !