ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ್‌ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಏ.9 ರವರೆಗೆ ಜೈಲಿಗೆ ಕಳುಹಿಸಿದೆ.

ಮದ್ಯ ನೀತಿ ಹಗರಣದಲ್ಲಿ ಕವಿತಾ ಮಾ.15ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕಳೆದ ವಾರವಷ್ಟೇ ಕಸ್ಟಡಿ ವಿಸ್ತರಣೆ ಮಾಡಲಾಗಿತ್ತು. ಈ ವೇಳೆ ಮೊಬೈಲ್‌ ಡೇಟಾ ಪರಿಶೀಲನೆ ಮಾಡಲಾಗಿತ್ತು.

ಇಂದು ದೆಹಲಿ ನ್ಯಾಯಾಲಯ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!