ಕಾಂಗ್ರೆಸ್‌ ನತ್ತ ಮುಖಮಾಡಿದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಕಾಂಗ್ರೆಸ್‌ಗೆ ಸೇರುವುದಾಗಿ ಸೋಮವಾರ ಹೇಳಿದ್ದಾರೆ. ಅವರ ಮಗ ಬ್ರಿಜೇಂದ್ರ ಸಿಂಗ್ ಸುಮಾರು ಒಂದು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರಿದ್ದರು. ಇನ್ನು ಬಿರೇಂದರ್ ಪತ್ನಿ ಪ್ರೇಮಲತಾ ಸಿಂಗ್ ಕೂಡ ಬಿಜೆಪಿ ತೊರೆದಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ‌ಮಾತನಾಡಿದ ಬಿರೇಂದರ್ ಸಿಂಗ್, ‘ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ರಾಜೀನಾಮೆಯನ್ನು ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ ಅವರಿಗೆ ಕಳುಹಿಸಿದ್ದೇನೆ. 2014-2019ರ ಅವಧಿಯಲ್ಲಿ ಶಾಸಕಿಯಾಗಿದ್ದ ನನ್ನ ಪತ್ನಿ ಪ್ರೇಮಲತಾ ಕೂಡ ಪಕ್ಷವನ್ನು ತೊರೆದಿದ್ದಾರೆ. ನಾಳೆ ನಾವು (ಮಂಗಳವಾರ) ಕಾಂಗ್ರೆಸ್‌ಗೆ ಸೇರುತ್ತೇವೆ’ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಸರ್ಕಾರದಲ್ಲಿ ಬಿರೇಂದರ್ ಸಿಂಗ್ ಕೇಂದ್ರ ಉಕ್ಕು ಸಚಿವರಾಗಿ ಸೇವೆಸಲ್ಲಿಸಿದ್ದರು. ಅಲ್ಲದೇ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟದ ಸಮಯದಲ್ಲಿ, ಬಿರೇಂದರ್ ಸಿಂಗ್ ರೈತರಿಗೆ ತಮ್ಮ ಬೆಂಬಲ ನೀಡಿದ್ದರು. ಬಿರೇಂದರ್ ಸಿಂಗ್, ಸ್ವಾತಂತ್ರ್ಯ ಪೂರ್ವದಲ್ಲಿ ರೈತರ ಹಿತಾಸಕ್ತಿಗಾಗಿ ಹೋರಾಟ ನಡೆಸಿರುವ ಪ್ರಮುಖ ರಾಜಕಾರಣಿ ಸರ್. ಛೋಟು ರಾಮ್ ಅವರ ಮೊಮ್ಮಗನಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!