ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿದ್ದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮೂಳೆ ಮುರಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಇಡಿ ವಿರುದ್ಧ ಇಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ವೇಳೆ ತಳ್ಳಾಟ ನೂಕಾಟದಲ್ಲಿ ಬಿದ್ದು, ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಪಿ.ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತಕ್ಕೊಳಗಾಗಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯಿಸಿದ್ದು, ಈ ವೇಳೆ ಎಡ ಪಕ್ಕೆಲುಬು ಮುರಿತಕ್ಕೊಳಗಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಂತ ಸಮನ್ಸ್ ವಿರೋಧಿಸಿ, ಇಂದು ದೇಶಾದ್ಯಂತ ಕಾಂಗ್ರೆಸ್ ನಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಸದ್ಯ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!