ಮಾಜಿ ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ, ಗಾಯಗಳಿಂದ ಹರೀಶ್ ರಾವತ್ ಜಾಲಿ ಗ್ರಾಂಟ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ರಾತ್ರಿ ಉತ್ತರಾಖಂಡದ ಉಧಂಸಿಂಗ್ ನಗರ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ

ರಾವತ್ ಕೆಲವು ಕಾರ್ಮಿಕರೊಂದಿಗೆ ಮಂಗಳವಾರ ತಡರಾತ್ರಿ ಉಧಮ್ ಸಿಂಗ್ ನಗರದ ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಜ್‌ಪುರ ರೈಲ್ವೇ ಕ್ರಾಸಿಂಗ್ ಬಳಿ ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ರಾವತ್‌ಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ಪೊಲೀಸರು ಖಚಿತಪಡಿಸಿದರು.

ಈ ಕುರಿತು ತಡವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಹರೀಶ್‌ ರಾವತ್‌..ʻಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಆಘಾತಕ್ಕೊಳಗಾಗಿ, ತಪಾಸಣೆಗೆಂದು ಆಸ್ಪತ್ರೆಗೆ ಹೋಗಿದ್ದೆ. ಈಗ ಎಲ್ಲವೂ ಸರಿಯಾಗಿದೆ ಎಂದು ವೈದ್ಯರು ಹೇಳಿ ಡಿಸ್ಚಾರ್ಜ್ ಮಾಡಿದ್ದಾರೆ. ಆತಂಕಪಡುವ ಅಗತ್ಯವಿಲ್ಲ. ನಾನು ಮತ್ತು ನನ್ನ ಸಹೋದ್ಯೋಗಿಗಳು ಸುರಕ್ಷಿತವಾಗಿರುವುದಾಗಿʼ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!