ಹಳಿತಪ್ಪಿದ ಈಶಾನ್ಯ ಎಕ್ಸ್‌ಪ್ರೆಸ್ ರೈಲು: ನಾಲ್ವರ ಸಾವು, 50 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಒಡಿಶಾ ರೈಲು ದುರಂತದ ಬಳಿಕ ಮತ್ತೊಂದು ರೈಲು ಅಪಘಾತ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ ಘಟನೆ ನಡೆದಿದೆ.

ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನಿಂದ ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‌ಗೆ ಪ್ರಯಾಣಿಸುತ್ತಿದ್ದ ಈಶಾನ್ಯ ಎಕ್ಸ್‌ಪ್ರೆಸ್ ರೈಲಿನ ಆರು ಬೋಗಿಗಳು ಬುಧವಾರ ರಾತ್ರಿ 9:53ಕ್ಕೆ ಹಳಿತಪ್ಪಿದವು. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ರೈಲ್ವೆ ಸಚಿವಾಲಯ ತಿಳಿಸಿದೆ.

ಹೆಚ್ಚಿದ ಸಹಾಯ ಕಾರ್ಯಗಳು

ರೈಲು ಅಪಘಾತದ ಬಳಿಕ ದೆಹಲಿ-ದಿಬ್ರುಗಢ್ ನಡುವೆ ರಾಜಧಾನಿ ಎಕ್ಸ್‌ಪ್ರೆಸ್ ಸೇರಿದಂತೆ 18 ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಬೋಗಿಗಳ ಮರುಜೋಡಣೆಗೆ ವಾರ್ ರೂಮ್‌ಗಳನ್ನು ಸ್ಥಾಪಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರೈಲು ಹಳಿತಪ್ಪಿದ ಸ್ಥಳದಲ್ಲಿ ಯುದ್ಧದ ರೀತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಜಿಲ್ಲಾಡಳಿತ, ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯರು ಜಂಟಿಯಾಗಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ವಿಪತ್ತು ನಿರ್ವಹಣೆ ಇಲಾಖೆ, ಬಕ್ಸರ್ ಮತ್ತು ಭೋಜ್‌ಪುರದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮಾತನಾಡಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

ಅಪಘಾತದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು,  ಈ ರೀತಿ ಇವೆ..

  • ಪಾಟ್ನಾ ಜಂಕ್ಷನ್- 9771449971
  • ದಾನಪುರ – 8905697493,
  • ಅರಾ- 8306182542,
  • ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್- 9794849461, 8081206628

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!