ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಪಿಲಾ ಹೋಟೆಲ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನುಷ ಘಟನೆ ನಿಜಾಮಾಬಾದ್ನಲ್ಲಿ ನಡೆದಿದೆ. ಮೃತರನ್ನು ಆದಿಲಾಬಾದ್ ಜಿಲ್ಲೆಯ ಸೂರ್ಯಪ್ರಕಾಶ್ (37), ಪತ್ನಿ ಅಕ್ಷಯ (36), ಪ್ರತ್ಯೂಷಾ (13) ಮತ್ತು ಅದ್ವೈತ್ (10) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕಳೆದ ಎರಡು ವಾರಗಳಿಂದ ಹೋಟೆಲ್ನಲ್ಲಿ ತಂಗಿದ್ದರು ಎಂದು ಹೊಟೇಲ್ ಮ್ಯಾನೇಜರ್ ತಿಳಿಸಿದ್ದಾರೆ. ತಾಯಿ ಮತ್ತು ಇಬ್ಬರು ಮಕ್ಕಳು ಕೀಟನಾಶಕ ಸೇವಿಸಿದ್ದು, ಸೂರ್ಯಪ್ರಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೂರ್ಯಪ್ರಕಾಶ್ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ನಂತರ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸೂರ್ಯಪ್ರಕಾಶ್ ಹೈದರಾಬಾದ್ ನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬದವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವ್ಯಾಪಾರದಲ್ಲಿ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೀರಾ? ಅಥವಾ ಬೇರೆ ಯಾವುದೇ ಸಮಸ್ಯೆಗಳಿವೆಯೇ? ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.