ಹೊಸದಿಗಂತ ವರದಿ ಚಿತ್ರದುರ್ಗ:
ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಸಮೀಪದ ಮಲ್ಲಾಪುರ ಗೊಲ್ಲರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶಂಶುದ್ದೀನ್ (40), ಮಲ್ಲಿಕಾ (37), ಕಲೀಲ್ (42) ಮತ್ತು ತಬ್ರೆಜ್ (13) ಮೃತ ದುರ್ದೈವಿಗಳು. ನರ್ಗಿಸ್, ರೆಹಾನ್, ರೆಹಮಾನ್ ಎಂಬುವರು ಗಾಯಗೊಂಡಿದ್ದಾರೆ. ಈ ಪೈಕಿ ರೆಹಮಾನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ ಕಾರಿನಲ್ಲಿ ಏಳು ಜನರು ಹೊಸಪೇಟೆಯಿಂದ ಬೆಂಗಳೂರಿಗೆ ಪ್ತಯಾಣಿಸುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತ ದೇಹಗಳು ಹಾಗೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೂಡ ಕೊಡಿಸಲಾಗಿದೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.