ಭೀಕರ ರಸ್ತೆ ಅಪಘಾತ: ಆಟೋಗೆ ಕಾರು ಡಿಕ್ಕಿ, ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೇದಕ್ ಜಿಲ್ಲೆಯ ನರಸಿಂಗಿ ಉಪನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋಗೆ ಕಾರು ಡಿಕ್ಕಿಯಾಗಿ  ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ನರಸಿಂಗಿ ಮಂಡಲದ ಮಲ್ಲೂರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಆರ್ಮೂರ್ ಮಂಡಲದ ಏಲೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಆರ್ಮೂರ್ ನಿಂದ ಗಜ್ವೇಲ್ ಕಡೆಗೆ ಹೋಗುತ್ತಿದ್ದಾಗ ಈ ರಸ್ತೆ ಅಪಘಾತ ಸಂಭವಿಸಿದೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತರನ್ನು ತಂದೆ ಮತ್ತು ಮಗ ಶೇಖರ್ ಮತ್ತು ಯಶವಂತ್ (9), ದಂಪತಿ ಬಾಲನರಸಯ್ಯ ಮತ್ತು ಮನೆಮ್ಮ ಎಂದು ಪೊಲೀಸರು ಗುರುತಿಸಿದ್ದು, ಗಾಯಗೊಂಡವರನ್ನು ಕವಿತಾ ಮತ್ತು ಅವಿನಾಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಿಜಾಮಾಬಾದ್ ಜಿಲ್ಲೆಯ ಆರ್ಮರ್‌ಗೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!