ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಬ್ರಹ್ಮಾವರದಲ್ಲಿ ಮೀನು ಹಿಡಿಯಲು ತೆರಳಿದ್ದ ನಾಲ್ವರು ಮುಳುಗಿ ಮೃತಪಟ್ಟಿದ್ದಾರೆ. ಕುಕ್ಕಡೆ ಕಿಣಿಯರ ಕುದ್ರು ನದಿ ಬಳಿಯಲ್ಲಿ ದುರಂತ ಸಂಭವಿಸಿದ್ದು, ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ಮೀನು ಹಿಡಿಯಲು ಹೋಗಿ ಮೃತಪಟ್ಟಿದ್ದಾರೆ.
ಇವರೆಲ್ಲರೂ ಉಡುಪಿ ಹಾಗೂ ಚಿಕ್ಕಮಗಳೂರು ಮೂಲದವರಾಗಿದ್ದು, ರಂಜಾನ್ ಸಂಭ್ರಮಕ್ಕಾಗಿ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿಯಲ್ಲಿ ಕುಳಿತು ಮೀನು ಹಿಡಿಯಲು ತೆರಳಿದ್ದು, ನದಿಯ ನೀರಿನ ಮಟ್ಟ ಹೆಚ್ಚಾಗಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಏಳು ಯುವಕರು ಒಟ್ಟಿಗೇ ತೆರಳಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.