ಉಗ್ರರ ಹುಟ್ಟಡಗಿಸಿದ ಸೇನೆ: ನಾಲ್ವರ ಎದೆಸೀಳಿದ ಗುಂಡೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಲನವಲನಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಸೇನಾ ಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಸದೆಬಡಿದಿದ್ದಾರೆ. ಭಾರತೀಯ ಸೇನೆಯ ವಿಶೇಷ ಪಡೆ, ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಸಿಂಧರಾ ಮತ್ತು ಪೂಂಚ್ ಪ್ರದೇಶಗಳಲ್ಲಿ ಭಯೋತ್ಪಾದಕರ ಹುಡುಕಾಟವನ್ನು ಆರಂಭಿಸಿದ್ದರು.

ಉಗ್ರರನ್ನು ಬೇಟೆಯಾಡಲು ಕೇಂದ್ರ ಪಡೆಗಳು ಡ್ರೋನ್‌ಗಳನ್ನು ನಿಯೋಜಿಸಲಾಗಿತ್ತು. ಸೋಮವಾರ ರಾತ್ರಿ 11.30 ಕ್ಕೆ ಭಯೋತ್ಪಾದಕರು ಮತ್ತು ಕೇಂದ್ರ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಮಂಗಳವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ಶುರುವಾಗಿದೆ. ರಾತ್ರಿ ಹತರಾದ ಉಗ್ರರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ವಿವರಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!