ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಆ್ಯಂಡ್​ ಗ್ಯಾಂಗ್​ ನ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ(Abhinava Halashree)ಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ.

ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್​ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಹಾಲಾಶ್ರೀಗೆ ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಬಳಿಕ ಹಾಲಶ್ರೀ ಪರ ವಕೀಲರು,  ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ಅಭಿನವ ಹಾಲಶ್ರೀ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಲಾಯಿತು. ಈ ಬಳಿಕ ಅಭಿನವ ಹಾಲಶ್ರೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!