ವಂಚನೆ ಆರೋಪ ಕೇಸ್: ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೇ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್(Karnataka High Court) ​ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ(Ramesh Jarkiholi) ಸೂಚಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್​, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ.

ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್​ನಿಂದ 232 ಕೋಟಿ 88 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದ್ರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ್ದರು. ಆದ್ರೆ, ಈ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!