ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ಭಾರತ ಸರ್ಕಾರ ಅಲ್ಲಿ ಸಿಲುಕಿರುವ ದೇಶದ ವಿದ್ಯಾರ್ಥಿಗಳನ್ನು ಕರೆತರಲು ಸತತ ಪ್ರಯತ್ನ ಮಾಡುತ್ತಿದೆ. ಉಕ್ರೇನ್ನಿಂದ ಬಂದ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ನೀಡಲು ಕೆಎಸ್ಆರ್ಟಿಸಿ ಮುಂದಾಗಿದ್ದು, ತಮ್ಮೂರಿಗೆ ತೆರಳಲು ಸಹಾಯ ಮಾಡುತ್ತಿದೆ.
ವಿಮಾನ ಮೂಲಕ ರಾಜ್ಯ ತಲುಪಿದ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮೂರಿಗೆ ತೆರಳಲು ಕೆಎಸ್ಆರ್ಟಿಸಿ ಉಚಿತ ಬಸ್ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ.