ಈ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಉಚಿತ ಪ್ರಯಾಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಪರ್ಧೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ಒದಗಿಸುವ ವಿಭಿನ್ನ ಪ್ರಯತ್ನವನ್ನು ಸರ್ಕಾರ ಮಾಡಿದೆ.

ಸರಸ್ವತಿ ವಿದ್ಯಾ ಮಂದಿರ ಶಾಲೆಯ 50 ವಿದ್ಯಾರ್ಥಿಗಳನ್ನು ಸ್ಪರ್ಧೆಯ ಮೂಲಕ ಆಯ್ಕೆ ಮಾಡಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭಾನುವಾರ ಒಡಿಸ್ಸಾದ ಕಟಕ್‌ನಲ್ಲಿರುವ ಸರಸ್ವತಿ ವಿದ್ಯಾ ಮಂದಿರ ಶಾಲೆಯ ಭೂಮಿಪೂಜೆ ನೆರವೇರಿಸಿ ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವರು ಸಂವಾದ ನಡೆಸಿದರು. ಈ ವೇಳೆ ವಂದೇ ಭಾರತ್‌ ರೈಲಿನ ವಿಡಿಯೋ ನೋಡಿದ ವಿದ್ಯಾರ್ಥಿಗಳಿಗೆ ರೈಲಿನಲ್ಲಿ ಸಂಚರಿಸುವ ಆಸೆ ಇರುವುದು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಅವಕಾಶವನ್ನು ನೀಡಲಾಗುತ್ತಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!